ಹೊಸದುರ್ಗ
ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದಾರ ಹೊಸದುರ್ಗ ತಾಲೂಕ ಘಟಕವನ್ನು ಸೋಮವಾರ ಉದ್ಘಾಟಿಸಿದರು. ಪಟ್ಟಣದ ಸಿದ್ದರಾಮ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕ ಘಟಕದ ಅಧ್ಯಕ್ಷ ಜಿ.ಮಲ್ಲೇಶ ವಹಿಸಿದ್ದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಲಿಂಗಾಯತ ಧರ್ಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತೆ ಕಲ್ಯಾಣ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಯಾವಾಗ ನಡೆಸಬೇಕು ಎಂಬುದನ್ನು ಇಲ್ಲಿರುವ ಕೆಲವರೊಂದಿಗೆ ಸಭೆಯ ನಂತರ ಚರ್ಚಿಸುತ್ತೇವೆ. ನಿಮ್ಮ ಸಲಹೆಗಳನ್ನು ನಮಗಾಗಲಿ, ಜಾಮದಾರ ಅವರಿಗಾಗಲಿ ಹೇಳಬಹುದು ಎಂದರು.