ತುಮಕೂರು
ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡಮಾಡುವ 2024ನೇ ಸಾಲಿನ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆ ಆಗಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಕೆ.ಎಚ್.ಶಿವರುದ್ರಯ್ಯ ತಿಳಿಸಿದ್ದಾರೆ.
ಪ್ರಶಸ್ತಿಯು ₹1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಸಿದ್ಧಗಂಗಾ ಮಠದಲ್ಲಿ ಜನವರಿ 21ರಂದು ನಡೆಯುವ
ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
‘ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದ ಗೊರುಚ ಅವರ ಜಾನಪದ ಹಾಗೂ ಶರಣ ಸಾಹಿತ್ಯಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ,’ ಎಂದು ಹೇಳಿದ್ದಾರೆ.