ಹಾರಕೂಡ (ಬಸವಕಲ್ಯಾಣ ತಾ.)
ಧಾರವಾಡ ಮುರುಘಾಮಠದ ಪೂಜ್ಯ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮತ್ತು ಬೈಲೂರು ನಿಷ್ಕಲ ಮಂಟಪದ ಪೂಜ್ಯ ನಿಜಗುಣಾನಂದ ಮಹಾಸ್ವಾಮಿಗಳವರಿಗೆ ಹಾರಕೂಡನ ಶ್ರೀ ಸದ್ಗುರು ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದ ವತಿಯಿಂದ “ಬಸವ ಭಾನು” ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.
ಪೂಜ್ಯ ಶ್ರೀ ಸದ್ಗುರು ಚನ್ನಬಸವ ಶಿವಯೋಗಿಗಳವರ 73ನೇ ಜಾತ್ರಾ ಮಹೋತ್ಸವದ ಅಂಗವಾಗಿ ಜನವರಿ 4, ಶನಿವಾರ ಸಂಜೆ ರಥೋತ್ಸವದ ನಂತರ ನಡೆದ ಶಿವಾನುಭವ ಚಿಂತನ ಗೋಷ್ಠಿಯಲ್ಲಿ ಹಿರೇಮಠದ ಪೂಜ್ಯ ಡಾ. ಚನ್ನವೀರ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿ ಶ್ರೀಗಳನ್ನು ಸತ್ಕರಿಸಿದರು.
ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಬಸವಕಲ್ಯಾಣ ಶಾಸಕ ಶರಣು ಸಲಗರ, ಧನರಾಜ ತಾಳಂಪಳ್ಳಿ, ಚಂದ್ರಶೇಖರ ಪಾಟೀಲ, ಜಗದೇವ ಗುತ್ತೇದಾರ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದಂಗವಾಗಿ ಜನವರಿ 5ರಂದು ಜಂಗಿ ಪೈಲ್ವಾನರ ಥೇಟರ್ ಕುಸ್ತಿಗಳು ನಡೆದವು. 6ರಂದು ಪಶು ಪ್ರದರ್ಶನ ನಡೆದು, ಉತ್ತಮ ತಳಿಗಳಿಗೆ ಬಹುಮಾನ ವಿತರಿಸಲಾಯಿತು. ಜಾತ್ರಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು.