ಸುತ್ತೂರು ಶ್ರೀಗಳಿಂದ ವೀರಶೈವ ಲಿಂಗಾಯತ ಕಾನ್‌ಕ್ಲೇವ್ ಉದ್ಘಾಟನೆ

ಬಸವ ಮೀಡಿಯಾ
ಬಸವ ಮೀಡಿಯಾ

ಚಾಮರಾಜನಗರ

ಜನವರಿ 17ರಿಂದ 19ರವರೆಗೆ ನಡೆಯಲಿರುವ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್‌ಕ್ಲೇವ್ ಅನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.

ಅಂತರರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ ವತಿಯಿಂದ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನ್‌ಕ್ಲೇವ್ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 17ರಂದು ಕಾರ್ಯಕ್ರಮವನ್ನು
ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್‌, ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳ ಇಲಾಖೆ ನಿರ್ದೇಶಕ ನಿತೇಶ್‌ ಪಾಟೀಲ್‌, ರಾಷ್ಟ್ರೀಯ ಹಸಿರು ಟ್ರಿಬ್ಯುನಲ್‌ ಚೇರ್ಮನ್ ಸುಭಾಶ್ ಬಿ.ಅಡಿ, ಟಿಎಂಎ ಚೇರ್ಮನ್‌ ಬಾಲಚಂದ್ರಸಿನಾ ರಾವ್ ರಾಣೆ, ಆದರ್ಶ್ ಗ್ರೂಪ್‌ನ ಸಂಸ್ಥಾಪಕ ಬಿ.ಎಂ.ಜಯಶಂಕರ್‌, ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ, ವಿಧಾನ ಪರಿಷತ್ ಸದಸ್ಯ ನವೀನ್‌ ಕೆ.ಎಸ್‌. ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಜ್ಯೋತಿ ಲ್ಯಾಬರೇಟರಿಸ್‌ ಜೆಎಂಡಿ ಉಲ್ಲಾಸ್ ಕಾಮತ್ ಅವರಿಂದ ವಿಚಾರಗೋಷ್ಠಿ ನಡೆಯಲಿದೆ.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್‌, ಗಾಯಕ ವಾಸುಕಿ ವೈಭವ್ ಭಾಗವಹಿಸಲಿದ್ದಾರೆ.

18ರಂದು ಹೆಲ್ತ್ ಸಮಿಟ್‌ನಲ್ಲಿ ಮೆಡಿಕಲ್ ಲೀಡರ್ ಶಿಪ್‌ ಕುರಿತು ವಿಚಾರ ಮಂಡನೆ ನಡೆಯಲಿದೆ. ಸಂಜೆ 4ಕ್ಕೆ ವಿಆರ್‌ಎಲ್‌ ಲಾಜಿಸ್ಟಿಕ್ಸ್‌ ಎಂಡಿ ಆನಂದ ಸಂಕೇಶ್ವರ ವಿಚಾರಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯಕ ರಾಜೇಶ್ ಕೃಷ್ಣನ್‌, ಅರ್ಚನಾ ಉಡುಪ ಭಾಗವಹಿಸಲಿದ್ದಾರೆ.

19ರಂದು ಸಮಾರೋಪ ನಡೆಯಲಿದ್ದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಚಿವ ಈಶ್ವರ್ ಖಂಡ್ರೆ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ವಿಜಯಾನಂದ ಕಾಶಪ್ಪನವರ್, ಸಂಸದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಶ್ರೀವತ್ಸ, ಕೆ.ಹರೀಶ್ ಗೌಡ, ಅಶೋಕ್ ಐರನ್ ಗ್ರೂಪ್‌ ಜೆಎಂಸಿ ಜಯಂತ್ ಹುಂಬರವಾಡಿ, ವಿಧಾನ ಪರಿಷತ್ ಸದಸ್ಯ ನವೀನ್ ಭಾಗವಹಿಸಲಿದ್ದಾರೆ. ಸಂಜೆ 7ಕ್ಕೆ ಅನನ್ಯ ಭಟ್‌ ಗಾಯನ ಕಾರ್ಯಕ್ರಮ ಇರಲಿದೆ ಎಂದು ಮಾಹಿತಿ ನೀಡಿದರು.

ಸಮಾವೇಶವು ವೀರಶೈವ ಲಿಂಗಾಯತ ಸಮುದಾಯದ ಉದ್ಯಮಿಗಳು, ವೃತ್ತಿಪರರನ್ನು ಒಂದೇ ವೇದಿಕೆಯಡಿ ಸೇರಿಸಲಾಗುತ್ತಿದ್ದು ಆರ್ಥಿಕ, ಕೈಗಾರಿಕೆ, ವ್ಯಾಪಾರ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ. ದೇಶ ವಿದೇಶಗಳಿಂದ ಸಮುದಾಯದ ಉದ್ಯಮಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಆಹಾರ ಮೇಳ, ಚರ್ಚಾ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಯೂತ್ ಫೋರಂ ಮೈಸೂರು ವಿಭಾಗದ ಅಧ್ಯಕ್ಷ ಮಹದೇವ ಪ್ರಸಾದ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ,ಜಿಲ್ಲಾ ಉಪಾಧ್ಯಕ್ಷ ಎಂಆರ್‌ಎಫ್ ಮಹೇಶ್, ಪದಾಧಿಕಾರಿಗಳಾದ ಆಲೂರು ಪ್ರದೀಪ್‌, ಕಿರಣ್‌, ದೊಡ್ಡರಾಯಪೇಟೆ ಗಿರೀಸ್ ಇದ್ದರು.

Share This Article
Leave a comment

Leave a Reply

Your email address will not be published. Required fields are marked *