ಬೆಂಗಳೂರು
ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರದಂದು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಬಸವ ವೇದಿಕೆಯ ವತಿಯಿಂದ ಜರುಗಿದ ‘ಬಸವ ಜಯಂತಿ’ ಕಾರ್ಯಕ್ರಮ ಹಾಗೂ ‘ಬಸವಶ್ರೀ’ ಮತ್ತು ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಬಸವಶ್ರೀ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯ ಸಾಹಿತಿಗಳಾದ ನಾಡೋಜ ಶ್ರೀ ಗೊ.ರು. ಚನ್ನಬಸಪ್ಪನವರು ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರಾದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಹಾಗೂ ಪ್ರಖ್ಯಾತ ವಚನ ಗಾಯಕಿ ಶ್ರೀಮತಿ ಎಂ.ಡಿ ಪಲ್ಲವಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ, ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ, ಶ್ರೀ ಎಸ್. ಷಡಕ್ಷರಿಯವರು, ಬಸವ ವೇದಿಕೆಯ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ಹಾಗೂ ಪ್ರಶಸ್ತಿ ಪುರಸ್ಕೃತರು, ಗಣ್ಯಮಾನ್ಯರು ಉಪಸ್ಥಿತರಿದ್ದರು.