ಹೊಸ ತಂತ್ರಜ್ಞಾನ ಬಳಸಿ ಜಾತಿ ಗಣತಿ ನಡೆಸಿ: ವೀರಶೈವ ಮಹಾಸಭಾ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

‘ಮರು ಜಾತಿ ಜನಗಣತಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿರುವುದು ಸ್ವಾಗತಾರ್ಹ. ಹಿಂದಿನ ಲೋಪದೋಷಗಳನ್ನು ಸರಿಪಡಿಸಿಕೊಂಡು ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಗಣತಿ ನಡೆಸಬೇಕು’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಿಳಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ‘ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ವೈಜ್ಞಾನಿಕವಾಗಿಲ್ಲ ಮತ್ತು ಪಾರದರ್ಶಕವಾಗಿಲ್ಲ ಎಂದು ಆಧಾರ ಸಮೇತವಾಗಿ ಮಹಾಸಭಾ ಪ್ರತಿಭಟಿಸುತ್ತಲೇ ಬಂದಿದೆ’ ಎಂದು ಹೇಳಿದ್ದಾರೆ.

‘ಜಾತಿ ಜನಗಣತಿಗೆ ಮಹಾಸಭಾದ ವಿರೋಧವಿಲ್ಲ. ಆದರೆ, ವೈಜ್ಞಾನಿಕವಾಗಿ, ಸಮಗ್ರವಾಗಿ, ಆಧಾರ್‌ ಜೋಡಣೆ, ಎಐ ತಂತ್ರಜ್ಞಾನ ಬಳಸಿಕೊಂಡು ಅತ್ಯಾಧುನಿಕ ಪದ್ಧತಿ ಮೂಲಕ ಮರು ಗಣತಿ ನಡೆಸಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಸಮಾಜದ ಎಲ್ಲಾ ವರ್ಗಗಳಲ್ಲಿ ಅಭಿಯಾನ ಜಾಗೃತಿ ಮೂಡಿಸಬೇಕು
https://basavamedia.com/abiyana-girija-hasabi-analysis/

Share This Article
Leave a comment

Leave a Reply

Your email address will not be published. Required fields are marked *