ಸೇಡಂ
ತಾಲ್ಲೂಕಿನ ಕೋಡ್ಲಾ ಗ್ರಾಮದ ಉರಿಲಿಂಗ ಪೆದ್ದೀಶ್ವರ ಮಹಾಸಂಸ್ಥಾನ ಮಠದ ನವಿಕೃತ ಕಟ್ಟಡ, ಅತಿಥಿ ಗೃಹ, ಗ್ರಂಥಾಲಯದ ಉದ್ಘಾಟನಾ ಸಮಾರಂಭ ಜೂನ್ 15ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ.
ಮಠದ ನೂತನ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಉದ್ಘಾಟಿಸಲಿದ್ದಾರೆ ಎಂದು ಉರಿಲಿಂಗ ಪೆದ್ದೀಶ್ವರ ಮಠದ ಪೀಠಾಧಿಪತಿ ಜ್ಞಾನಪ್ರಕಾಶ ಸ್ವಾಮೀಜಿ ತಿಳಿಸಿದರು.
ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಗ್ರಂಥಾಲಯ ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಜ್ಯೋತಿ ಬೆಳಗಿಸಲಿದ್ದಾರೆ. ಸಂಸದ ರಾಧಾಕೃಷ್ಣ ದೊಡ್ಡಮನಿ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕುರು, ಬಸವರಾಜ ಪಾಟೀಲ ಉಡಗಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಆನೇಕ ಗಣ್ಯರು ಆಗಮಿಸಲಿದ್ದಾರೆ.

ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು, ಗುರುಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಶಿವಶರಣ ಹರಳಯ್ಯ ಪೀಠ ಹರಳಯ್ಯಸ್ವಾಮಿ, ಹುನಗುಂದ ಚಿತ್ತರಾಗಿ ಸಂಸ್ಥಾನ ಮಠದ ಶ್ರೀ ಗುರುಮಹಾಂತ ಅಪ್ಪಗಳವರು, ಧಾರವಾಡ ಮನಗೂಳಿ ಬಸವ ಮಹಾಮನೆ ಬಸವಾನಂದ ಸ್ವಾಮೀಜಿ, ಕಲಬುರಗಿ ಸಾರಂಗಧರ ಸಂಸ್ಥಾನ ಮಠದ ಡಾ. ಮಹಾಂತ ಶಿವಾಚಾರ್ಯರು, ಬಸವ ಮಹಾಮನೆಯ ಸಿದ್ದರಾಮ ಬೆಲ್ದಾಳ ಶರಣರು, ಕೂಡಲಸಂಗಮ ಬಸವ ಧರ್ಮ ಪೀಠದ ಶ್ರೀ ಮಹಾದೇವ ಸ್ವಾಮಿ, ಉಳವಿ ಚನ್ನಬಸವೇಶ್ವರ ಮಠದ ಬಸವಲಿಂಗಮೂರ್ತಿ ಶರಣರು, ಚಿತ್ರದುರ್ಗ ಛಲವಾದಿ ಮಠದ ಬಸವನಾಗಿದೇವ ಸ್ವಾಮೀಜಿ, ಆಣದೂರ ವೈಶಾಲಿ ಬುದ್ಧ ವಿಹಾರದ ಪೂಜ್ಯ ಭಂತೆ ಧಮ್ಮಾನಂದರು, ಉರಿಲಿಂಗಪೆದ್ದೀಶ್ವರ ಮಠದ ಪೀಠಾಧಿಪತಿ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಉರಿಲಿಂಗಪೆದ್ದೀಶ್ವರ ಶಾಖಾ ಮಠದ ಹರಗುರು ಚರಮೂರ್ತಿಗಳು ಹಾಗೂ ನಾಡಿನ ವಿವಿಧ ಮಠದ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸತ್ಕರಿಸಲಾಗುವುದು.