ಬೆಳಗಾವಿ
ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಗುರುಬಸವ ಬಳಗ ಮತ್ತು ತಾಲೂಕು ಜಾಗತಿಕ ಲಿಂಗಾಯತ ಮಹಾಸಭೆ ಇವರ ಸಹಯೋಗದಲ್ಲಿ 3ನೇ ರವಿವಾರದ ಮಾಸಿಕ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ನಡೆಯಿತು.

ಇದು 16ನೆಯ ಮಾಸಿಕ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮವಾಗಿದ್ದು ಶ್ರೀ ನಿಜಗುಣ ಶಿವಯೋಗಿಗಳ ಶ್ರೀ ಮಠದಲ್ಲಿ ಆಯೋಜಿಸಲಾಗಿತ್ತು. ಇಷ್ಟಲಿಂಗ ಪೂಜೆಯ ಪ್ರಾತ್ಯಕ್ಷಿಕೆಯನ್ನು ಸಂಚಾರಿ ಗುರುಬಸವ ಬಳಗದ ಜಿಲ್ಲಾ ಸಂಚಾಲಕರಾದ ಮಹಾಂತೇಶ ತೋರಣಗಟ್ಟಿ ನೆರವೇರಿಸಿಕೊಟ್ಟರು, ಜೊತೆಗೆ ದೇವನೊಬ್ಬ ನಾಮ ಹಲವು ಎನ್ನುವ ವಿಷಯದ ಕುರಿತು ಅನುಭಾವ ನೀಡಿದರು.
ಶರಣರಾದ ಬಿ.ಜಿ.ವಾಲಿ ಇಟಗಿ ಹಾಗೂ ಚಂದ್ರಶೇಖರ ಹುಬ್ಬಳ್ಳಿ ಅವರು ಲಿಂಗಾಂಗಯೋಗದ ಬಗ್ಗೆ ಅನುಭಾವ ನೀಡಿದರು.

ಶರಣರಾದ ಶಶಿಧರ ರೊಟ್ಟಿ, ಶಿವರುದ್ರ ಅರಳಿಕಟ್ಟಿ, ಎನ್.ಪಿ.ಉಪ್ಪಿನ, ಆನಂದ ಕೊಂಡಗುರಿ, ಪ್ರವೀಣ ರೊಟ್ಟಿ, ಸಿ.ಎಂ. ಹುಬ್ಬಳ್ಳಿ, ದಯಾನಂದ ಹಂಚಿನಮನಿ, ರಮೇಶ ತಿಗಡಿ, ನಾಗನಗೌಡ ಹಾದಿಮನಿ, ಶ್ರೀಕಾಂತ ಪಡಗಲ್, ಬಸನಗೌಡ ಹಾದಿಮನಿ, ಗುರುಬಸವ ಬಳಗ ಮತ್ತು ಜಾಗತಿಕ ಲಿಂಗಾಯತ ಮಹಾಸಭೆಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.