ಜನವರಿ 15 ರಿಂದ 20ರವರೆಗೆ ಸುತ್ತೂರು ಜಾತ್ರೆ

ಬಸವ ಮೀಡಿಯಾ
ಬಸವ ಮೀಡಿಯಾ

ಮೈಸೂರು

ಸುತ್ತೂರು ಶ್ರೀಕ್ಷೇತ್ರದಲ್ಲಿ ಸಂಪ್ರದಾಯದಂತೆ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಅವರ ಜಾತ್ರಾ ಮಹೋತ್ಸವ (ಸುತ್ತೂರು ಜಾತ್ರೆ)ವನ್ನು ಜ.15 ರಿಂದ 20ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಸಾನ್ನಿಧ್ಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಂಚಾಲಕರುಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಥೋತ್ಸವ, ತೆಪ್ಪೋತ್ಸವ, ಕೊಂಡೋತ್ಸವ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಎಂದಿನಂತೆ ಆರು ದಿನಗಳ ನಡೆಸಲು ಸಭೆ ತೀರ್ಮಾನ ಕೈಗೊಂಡಿತು.

ಬಸವ ಮೀಡಿಯಾ ಯೂ ಟ್ಯೂಬ್ ಚಾನೆಲ್ ಸೇರಿ
https://www.youtube.com/@basavamedia1

Share This Article
Leave a comment

Leave a Reply

Your email address will not be published. Required fields are marked *