ಬಸವೇಶ್ವರ ದೇವಾಲಯದ ಪುನರ್ ನಿರ್ಮಾಣಕ್ಕೆ 3 ಕೋಟಿ ನೀಡಿದ ಮುಸ್ಲಿಂ ಉದ್ಯಮಿ

ಬಸವ ಮೀಡಿಯಾ
ಬಸವ ಮೀಡಿಯಾ

ರಾಮನಗರ

ಇಲ್ಲಿನ ಮಂಗಳವಾರಪೇಟೆಯಲ್ಲಿ ಶಿಥಿಲಗೊಂಡಿದ್ದ ಬಸವೇಶ್ವರ ದೇವಾಲಯವನ್ನು ಮುಸ್ಲಿಂ ಉದ್ಯಮಿಯೊಬ್ಬರು ಕೋಟ್ಯಂತರ ರೂ. ವೆಚ್ಚ ಮಾಡಿ ಪುನರ್ ನಿರ್ಮಾಣ ಮಾಡಿದ್ದಾರೆ.

ಎಸ್. ಕೆ. ಬೀಡಿ ಮಾಲೀಕ ಸೈಯದ್ ಸದಾತ್ ವುಲ್ಲಾ ಸಖಾಫ್ ಅವರ ರೂ. 3 ಕೋಟಿ ದಾಸೋಹದ ನೆರವಿನಿಂದ ನಿರ್ಮಾಣವಾಗಿರುವ ನೂತನ ದೇಗುಲ ಕನ್ನಡ ರಾಜ್ಯೋತ್ಸವ ದಿನದಂದು ಅನಾವರಣಗೊಂಡಿತು.

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸೈಯದ್ ಉಲ್ಲಾ ಸಖಾಫ್ ಹಿಂದೂ ಮತ್ತು ಮುಸ್ಲಿಂ ಒಗ್ಗಟ್ಟಾಗಿ ಬದುಕುವುದು ಮುಖ್ಯ. ನಾವೆಲ್ಲ ಅಣ್ಣ-ತಮ್ಮಂದಿರಾಗಿ ಜೊತೆ ಜೊತೆಯಲ್ಲಿ ಸಾಗಿದರೆ ದೇಶ ಅಭಿವೃದ್ಧಿಯಾಗುತ್ತದೆ, ಎಂದರು.

ದೇವಸ್ಥಾನದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅನ್ನ ದಾಸೋಹ ಸೇರಿದಂತೆ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿವಿಧ ಕಾರ್ಯಕ್ರಮಗಳು ಸೋಮವಾರ ಸಂಪನ್ನಗೊಂಡವು.

ದೇಗುಲ ನಿರ್ಮಾಣಕ್ಕೆ ಇದೇ ಗ್ರಾಮದ ಕೆಂಪಮ್ಮ ಹಾಗೂ ಮೋಟೇಗೌಡರು ಜಾಗ ಕೊಟ್ಟಿದ್ದಾರೆ. ಈ ಹಿಂದೆಯೂ ಸಂತೇ ಮೊಗೇನಹಳ್ಳಿಯಲ್ಲಿ ಸ್ವಂತ ಹಣದಲ್ಲಿ ಸೈಯದ್ ಉಲ್ಲಾ ವೀರಭದ್ರೇಶ್ವರ ದೇಗುಲವನ್ನು ನಿರ್ಮಾಣ ಮಾಡಿದ್ದಾರೆ.

ಶ್ರೀ ಬಸವೇಶ್ವರ ವಿನಾಯಕ ಯುವಕರ ಬಳಗದವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
1 Comment
  • ದಾಸೋಹಿಗಳಿಗೆ ಶಲಣುಶರಣಾರ್ಥಿಗಳು 🙏🙏🙏🙏

Leave a Reply

Your email address will not be published. Required fields are marked *