ಚನ್ನಬಸವ ಪಟ್ಟದ್ದೇವರು, ಪ್ರಭುರಾವ್ ಕಂಬಳಿವಾಲೆ ಪುಸ್ತಕ ಲೋಕಾರ್ಪಣೆ

ಬಸವ ಮೀಡಿಯಾ
ಬಸವ ಮೀಡಿಯಾ

ಭಾಲ್ಕಿ:

ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾಭವನದಲ್ಲಿ ಶನಿವಾರ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡ, ಚನ್ನಬಸವೇಶ್ವರ ಗುರುಕುಲ ಕರಡ್ಯಾಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಏಕೀಕರಣ ಹೋರಾಟಗಾರರ ವ್ಯಕ್ತಿಚಿತ್ರ ಮಾಲೆ ಚನ್ನಬಸವ ಪಟ್ಟದ್ದೇವರು ಹಾಗೂ ಪ್ರಭುರಾವ್ ಕಂಬಳಿವಾಲೆ ಅವರ ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮಹಾತ್ಮರ ಕುರಿತಾದ ಪುಸ್ತಕಗಳಲ್ಲಿ ಅಡಗಿರುವ ಜೀವನ ಸಂದೇಶ, ಅನುಭವ ಓದುಗರ ಜೀವನದಲ್ಲಿ ಬಹುದೊಡ್ಡ ಪರಿವರ್ತನೆ ತರುತ್ತವೆ. ಆ ಮೂಲಕ ಸುಂದರ ಸಮಾಜ ನಿರ್ಮಿಸಲು ಪ್ರೇರಣೆ ನೀಡುತ್ತದೆ ಎಂದು ತಿಳಿಸಿದರು.

ಉತ್ತಮ ಸಾಹಿತ್ಯಕ್ಕೆ ಓದುಗರನ್ನು ತನ್ನತ್ತ ಆಕರ್ಷಿಸುವ ಅದ್ಭುತ ಶಕ್ತಿ ಇರುತ್ತದೆ. ಚನ್ನಬಸವ ಪಟ್ಟದ್ದೇವರ ಹಾಗೂ ಪ್ರಭುರಾವ್ ಕಂಬಳಿವಾಲೆ ಅವರ ಪುಸ್ತಕಗಳು ನಾಡು, ನುಡಿ, ಭಾಷೆ, ಇತಿಹಾಸ ಹಾಗೂ ಆಧ್ಯಾತ್ಮದ ಚಿಂತನೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅತ್ಯಮೂಲ್ಯ ಗ್ರಂಥಗಳಾಗಿವೆ ಎಂದು ಹೇಳಿದರು.

ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡದ ಅಧ್ಯಕ್ಷ ರಂಜಾನ್ ದುರ್ಗಾ ಮಾತನಾಡಿ, ಚನ್ನಬಸವ ಪಟ್ಟದೇವರು ಗುರುಗಳಲ್ಲಿಯೇ ಶ್ರೇಷ್ಠ, ಮಾದರಿ ಗುರುವಾಗಿದ್ದರು. ಪ್ರಭುರಾವ್ ಕಂಬಳಿವಾಲೆ ಅವರು ಸಾಮಾಜಿಕ ಸೇವೆ ಸಲ್ಲಿಸಿದವರಲ್ಲಿ ಹೆಸರು ವಾಸಿಯಾಗಿದ್ದಾರೆ. ಈ ಇಬ್ಬರು ಮಹನೀಯರ ಪುಸ್ತಕ ಲೋಕಾರ್ಪಣೆ ಆಗುತ್ತಿರುವುದು ತುಂಬಾ ಸಂತೋಷದ ಸಂಗತಿ ಎಂದು ಹೇಳಿದರು.

ನಮ್ಮ ಟ್ರಸ್ಟ್ ವತಿಯಿಂದ ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಸುಮಾರು 250 ಜನ ಮಹನೀಯರ ವ್ಯಕ್ತಿ ಚಿತ್ರಗಳು ಹೊರ ತರುವ ಯೋಜನೆ ಇದೆ. ಇಂದಿನ ಯುವಜನತೆ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಕುರಿತು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಪುಸ್ತಕಗಳ ಪರಿಚಯ ಮಾಡಿಕೊಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಚನ್ನಬಸವ ಪಟ್ಟದ್ದೇವರು ಪುಸ್ತಕ ರಚಿಸಿದ ಸಾಹಿತಿ ಸೋಮನಾಥ ನುಚ್ಚಾ, ಪ್ರಭುರಾವ್ ಕಂಬಳಿವಾಲೆ ಪುಸ್ತಕ ರಚಿಸಿದ ಸಾಹಿತಿ ಜಯಶ್ರೀ ಸುಕಾಲೆ ಮಾತನಾಡಿದರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಮಾಣಿಕರಾವ್ ಪಾಂಚಾಳ ವಂದಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/IuAONC0TfmA8PyaqHT9WIP

Share This Article
Leave a comment

Leave a Reply

Your email address will not be published. Required fields are marked *