ಹಿರೇಮಠ ಸಂಸ್ಥಾನ ಭಾಲ್ಕಿ ಅಡಿಯಲ್ಲಿ ಪರಮಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹಾಗೂ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರ ದಿವ್ಯಸಾನಿಧ್ಯದಲ್ಲಿ ಪ್ರತಿವರ್ಷ ಈ ವರ್ಷವು ನಡೆಯಲಿರುವ ಮರಣವೇ ಮಹಾನವಮಿ ಹಾಗೂ ಕಲ್ಯಾಣ ಕ್ರಾಂತಿ ವಿಜಯೋತ್ಸವ ಆಚರಿಸಲು ನಿರ್ಧರಿಸಲಾಯಿತು.
ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ಅಕ್ಕನಬಳಗದ ಶರಣೆಯರ ಸಭೆಯನ್ನು ಜರುಗಿತು. ಈ ಸಭೆಯಲ್ಲಿ ಸರ್ವಾನುಮತದಿಂದ ಸೇವಾ ಸಮಿತಿಯ ಅಧ್ಯಕ್ಷರಾಗಿ ಶರಣೆ ಚಂದ್ರಕಲಾ ಪ್ರಭು ಡಿಗ್ಗಿ ಅವರನ್ನು ನೇಮಕ ಮಾಡಲಾಯಿತು. ಪೂಜ್ಯರು ಚಂದ್ರಕಲಾ ಡಿಗ್ಗಿ ಅವರ ಅಧ್ಯಕ್ಷತೆಯಲ್ಲಿ ಒಂಭತ್ತು ದಿವಸಗಳ ಪರ್ಯಂತ ನಡೆಯಲಿರುವ ಈ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲ ಅಕ್ಕನಬಳಗದವರು ಸಹಕರಿಸಿ ಯಶಸ್ವಿಗೊಳಿಸಬೇಕು ಹಾಗೂ ಶರಣೆ ಮಲ್ಲಮ್ಮ ನಾಗನಕೇರೆ ಅವರಿಂದ ಒಂಭತ್ತು ದಿನಗಳು ಶಿವಯೋಗ ಸಾಧನೆ ನಡೆಯುತ್ತಿರುವುದು ಮತ್ತಷ್ಟು ವಿಶೇಷವಾಗಿದೆ ಎಂದು ಆಶೀರ್ವಚನ ನೀಡಿದರು.
ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಕಲಾ ಡಿಗ್ಗಿ ಅವರು ಪೂಜ್ಯರಿಂದ ಆಶೀರ್ವಾದ ಪಡೆದುಕೊಂಡು ಪೂಜ್ಯರು ನನಗೆ ಈ ಒಂದು ಜವಾಬ್ದಾರಿ ನೀಡಿರುವುದು ಬಸವಗುರುವಿನ ಆಶೀರ್ವಾದವೆಂದು ಭಾವಿಸುತ್ತೇನೆ. ತಮ್ಮಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿ ಮಾಡೋಣವೆಂದು ನುಡಿದರು. ಅಕ್ಕನಬಳಗದ ತಾಯಿಂದಿರು ಉಪಸ್ಥಿತರಿದ್ದರು.