ಸೋಮಶೆಟ್ಟಿ, ರವೀಂದ್ರನಾಥ ಸೇರಿ ಏಳು ಸಾಧಕರಿಗೆ ಅನುಭವ ಮಂಟಪ ಪ್ರಶಸ್ತಿ

ಬಸವ ಮೀಡಿಯಾ
ಬಸವ ಮೀಡಿಯಾ

ಬಸವಕಲ್ಯಾಣ:

ಬಸವಕಲ್ಯಾಣದಲ್ಲಿ ನಡೆಯುವ ೪೬ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ-೨೦೨೫ದಲ್ಲಿ ಅನುಭವ ಮಂಟಪದಿಂದ ಕೊಡಮಾಡುವ ೨೦೨೫ನೇ ಸಾಲಿನ ಪ್ರಶಸ್ತಿಗಳನ್ನು ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು ಘೋಷಿಸಿದ್ದಾರೆ.

ಬೀದರಿನ ಚಿತ್ರಕಲಾವಿದ ಸಿ.ಬಿ. ಸೋಮಶೆಟ್ಟಿ ಅವರ ಸಾಧನೆ ಗುರುತಿಸಿ, ‘ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.

ಹೊಸಪೇಟೆಯ ಖ್ಯಾತ ಚಿಂತಕ ಡಾ. ಕೆ. ರವೀಂದ್ರನಾಥ ಸಾಧನೆ ಗುರುತಿಸಿ, ‘ಡಾ.ಎಂ.ಎಂ. ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.  

ಶಿರೂರುನ ನಾಟಕಕಾರ ಬಸವರಾಜ ಬೆಂಗೇರಿ ಅವರ ಸೇವೆ ಗುರುತಿಸಿ, ‘ಬಸವಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.  

ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷರಾದ ಡಾ. ಎಸ್.ಜಿ. ಸುಶೀಲಮ್ಮ,  ಅವರ ಸಮಗ್ರ ಸೇವೆ ಗುರುತಿಸಿ, ‘ಅನುಭವಮಂಟಪ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.  

ಸುಪ್ರಸಿದ್ಧ ಆರ್ಯುವೇದ ವೈದ್ಯ ಡಾ. ಮಲ್ಲಿಕಾರ್ಜುನ ರಗಟೆ ಅವರ ಸೇವೆ ಗುರುತಿಸಿ, ‘ಶರಣ ವೈದ್ಯ ಸಂಗಣ್ಣ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ. ಹತ್ತು ಸಾವಿರ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.  

ಖಾನಾಪೂರದ ಸಾವಯವ ಕೃಷಿಕ ರಮೇಶ ಮೋರ್ಗೆ ಅವರ ಕೃಷಿ ಸೇವೆಯನ್ನು ಗುರುತಿಸಿ ‘ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ-೨೦೨೪’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ. ಹತ್ತು ಸಾವಿರ ಹಾಗೂ ಪ್ರಶಸ್ತಿ ಫಲಕ ಹೊಂದಿರುತ್ತದೆ.  

ಹುಡಗಿಯ ಸಾವಯವ ಕೃಷಿಕ ಸೋಮಶಂಕರ ಅವರ ಕೃಷಿ ಸೇವೆ ಗುರುತಿಸಿ ‘ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ-೨೦೨೫’ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ. ಹತ್ತು ಸಾವಿರ ಹಾಗೂ ಪ್ರಶಸ್ತಿ ಫಲಕ ಹೊಂದಿದೆ.  

ಎಲ್ಲ ಪ್ರಶಸ್ತಿಗಳು ಅನುಭವ ಮಂಟಪ ಉತ್ಸವದಲ್ಲಿ ಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *