ಬಳ್ಳಾರಿಯಲ್ಲಿ ಅನುಭವ ಮಂಟಪ ರಥಯಾತ್ರೆಗೆ ಸ್ವಾಗತ

ಬಳ್ಳಾರಿ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರ ಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಯು ಮಂಗಳವಾರ ಮುಂಜಾನೆ ಬಳ್ಳಾರಿಗೆ ಆಗಮಿಸಿತು.

ಸಮುದಾಯದ ಮುಖಂಡರು, ನಗರದ ಡಾ. ರಾಜಕುಮಾರ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವಾದಿ ಶರಣರ ರಥಯಾತ್ರೆಗೆ ಪೂಜೆ ಸಲ್ಲಿಸಿ ಪುಷ್ಪನಮನಗೈದು, ಗೌರವ ಸಮರ್ಪಿಸಲಾಯಿತು.

ಇದೇ ಏ.29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ “ಅನುಭವ ಮಂಟಪ-ಬಸವಾದಿ ಶರಣ ವೈಭವ” ಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿದ್ದು, ಮಂಗಳವಾರ ಬಳ್ಳಾರಿ ನಗರಕ್ಕೆ ಆಗಮಿಸಿದ ರಥಯಾತ್ರೆಯು ಸಿರಗುಪ್ಪ ಮೂಲಕ ರಾಯಚೂರು ಜಿಲ್ಲೆಗೆ ರಥಯಾತ್ರೆಯು ತೆರಳಿತು.

ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥದಲ್ಲಿ ಬಸವಣ್ಣ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ಭಗವಾನ್ ಗೌತಮ ಬುದ್ಧ, ಶಿವಶರಣೆ ಅಕ್ಕಮಹಾದೇವಿ, ಸಂತ ಶಿಶುನಾಳ ಶರೀಪ, ಗುರುನಾನಕ್, ಭಗವಾನ್ ಮಹಾವೀರ, ನಾರಾಯಣಗುರು, ಯೇಸು ಕ್ರಿಸ್ತರ ಪ್ರತಿಮೆಗಳನ್ನು ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ರಾಷ್ಟ್ರೀಯ ಬಸವ ದಳ ರಾಜ್ಯ ಉಪಾಧ್ಯಕ್ಷ ರವಿಶಂಕರ, ಬಸವರಾಜಪ್ಪ ಶರಣರು, ಮುಖಂಡರಾದ ಪನ್ನರಾಜ್ ಸಿರಿಗೇರಿ, ಟಿ.ಹೆಚ್.ಎಂ. ಬಸವರಾಜ್ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಬಸವದಳ, ಜಾ.ಲಿಂ.ಮಹಾಸಭಾ, ಬಸವಪರ ಸಂಘಟನೆಗಳ ಹಲವಾರು ಸದಸ್ಯರು ಇದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/CMDnqQbFJjwCptS1HUXnEd

Share This Article
Leave a comment

Leave a Reply

Your email address will not be published. Required fields are marked *