ಬೆಂಗಳೂರು
ಬಸವ ಬಳಗ ಸಂಘಟನೆಯಿಂದ ನಗರದ ಶಿವರಾಮ ಕಾರಂತ ನಗರದಲ್ಲಿರುವ ಸಮುದಾಯ ಭವನದಲ್ಲಿ ಮೇ 25ರಂದು ಬೆಳಿಗ್ಗೆ 11ಗಂಟೆಗೆ ಬಸವ ಜಯಂತಿ ಆಚರಣೆ ನಡೆಯಲಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ನೆಲಮಂಗಲ ಪವಾಡ ಶ್ರೀ ಬಸವಣ್ಣದೇವರ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಆಗಮಿಸುತ್ತಿದ್ದು, ಅಧ್ಯಕ್ಷತೆಯನ್ನು ಬಸವ ಬಳಗದ ಅಧ್ಯಕ್ಷ ಕ.ಚ. ಪಾಟೀಲ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಗಣ್ಯರಿಗೆ ಸತ್ಕಾರ ನಡೆಯಲಿದೆ. ಶರಣರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಬಸವ ಬಳಗದ ಪ್ರಧಾನ ಕಾರ್ಯದರ್ಶಿ ಅಶೋಕ ಬಣಕಾರ, ಖಜಾಂಚಿ ರೇಣುಕಾನಂದ ವಿನಂತಿಸಿಕೊಂಡಿದ್ದಾರೆ.

