ಹಾಸನದಲ್ಲಿ ಗೊರುಚ ದತ್ತಿ ನಿಧಿ ಪ್ರಶಸ್ತಿಗಳ ಪ್ರದಾನ

ಬಸವ ಮೀಡಿಯಾ
ಬಸವ ಮೀಡಿಯಾ

ಹಾಸನ

ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಈ ವರ್ಷದ ‘ಗೊರುಚ ದತ್ತಿ ನಿಧಿ ಪ್ರಶಸ್ತಿ’ಗಳನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಅಖಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಇವರ ವತಿಯಿಂದ ನಡೆಯಿತು.

ಶಾಂತಾ ಇಮ್ರಾಪುರ ಅವರಿಗೆ ‘ಗೊರುಚ ಶರಣ ಪ್ರಶಸ್ತಿ’, ಟಿ ಆರ್ ಚಂದ್ರಶೇಖರ್ ಅವರಿಗೆ ‘ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ’, ಮೊಗಳ್ಳಿ ಗಣೇಶ್ ಅವರಿಗೆ ‘ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ’, ಜಗನ್ನಾಥ ಹೆಬ್ಬಾಳೆ ಅವರಿಗೆ ‘ಗೊರುಚ ಜಾನಪದ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಟಿ ಆರ್ ಚಂದ್ರಶೇಖರ್ ಅವರು ಬಸವ ಮೀಡಿಯಾ ಟ್ರಸ್ಟಿನ ಛೇರ್ಮನ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಶಸ್ತಿ ವಿತರಿಸಿದ ಹಿರಿಯ ಸಾಹಿತಿ ಪ್ರೋ.ಎಸ್.ಜಿ. ಸಿದ್ದರಾಮಯ್ಯ ಶರಣ ಸಾಹಿತ್ಯ ಪರಿಷತ್ತು ಅಗಮ್ಯ ಸಾಹಿತ್ಯ ಕೃಷಿ ಮಾಡುವ ಅರ್ಹರಿಗೆ ಪ್ರಶಸ್ತಿ ನೀಡುತ್ತಾ ಬಂದಿರುವುದು ಅನನ್ಯವಾಗಿದೆ. ಆದರೆ ಇತ್ತೀಚಿನ ಸಾಹಿತ್ಯ ಸಮ್ಮೇಳನಗಳಲ್ಲಿ ಕೋಟ್ಯಾಂತರ ಹಣವನ್ನು ವಿನಾಕಾರಣ ದುಂದು ವೆಚ್ಚ ಮಾಡುತ್ತಿರುವುದು ನಿಜಕ್ಕೂ ಶೋಚನೀಯ. ಸಾಹಿತ್ಯ ಸಂವರ್ಧನೆ ಇಲ್ಲದೆ ಕೇವಲ ಆಡಂಬರದ ಜಾತ್ರೆಗಳ ರೀತಿಯಲ್ಲಿ ನಡೆಯುತ್ತಿದೆ. ನಮ್ಮಲ್ಲಿ ಅದಷ್ಟೇ ಪ್ರತಿಭಾವಂತರು ನೂರಾರು ಪ್ರಶಸ್ತಿಗಳಿಂದ ವಂಚಿತರಾಗಿದ್ದಾರೆ, ಎಂದು ಹೇಳಿದರು
ಅಖಿಲ ಭಾರತ ಶರಣ ಸಾಹಿತ್ಯ ರಾಜ್ಯಾಧ್ಯಕ್ಣರಾದ ಡಾ. ಸಿ. ಸೋಮಶೇಖರ ಮಾತನಾಡಿ, ದೇಶ, ವಿದೇಶಗಳಲ್ಲಿ ಶರಣ ಸಾಹಿತ್ಯದ ಕಂಪನ್ನು ಪಸರಿಸಿದ ಕೀರ್ತಿ ಗೊರುಚ ಅವರಿಗೆ ಸಲ್ಲುತ್ತದೆ. ಎರಡು ದಶಕಗಳ ಕಾಲ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಗೊ.ರು.ಚ ಅವಿರತ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಗಾಂಜಿ, ವ್ಯವಸ್ಥಾಪಕರು ಪುಟ್ಟರಾಜು, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಹೆಚ್.ಎಲ್. ಮಲ್ಲೇಶಗೌಡ, ರಾಜ್ಯ ಸಂಚಾಲಕಿ ಸುಶೀಲಾ ಸೋಮಶೇಖರ, ರಾಜ್ಯ ಕಾರ್ಯದರ್ಶಿ ಸೋಮಶೇಖರ ಗಾಂಜಿ,ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ತೀರ್ಥಕುಮಾರಿ, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಖಜಾಂಚಿ ರುದ್ರಸ್ವಾಮಿ, ಹಾಸನ ತಾಲ್ಲೂಕು ಅಧ್ಯಕ್ಷರು ಪುಟ್ಟರಾಜು,
ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶಮೂರ್ತಿ, ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KW7PgYimGT7HL73bAEKzSR

Share This Article
Leave a comment

Leave a Reply

Your email address will not be published. Required fields are marked *