ಚಿತ್ರದುರ್ಗ
ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು ನುಡಿದರು.
ಅವರು ಜನೇವರಿ 6ರಂದು ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ “ಕಾಯಕ ಜನೋತ್ಸವ-2026” ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತ ಮಾತನಾಡುತ್ತಿದ್ದರು.






