ಗದಗ
ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ನೀಡುವ “ಮಾನವತಾವಾದಿ ಬಸವೇಶ್ವರ ಪ್ರಶಸ್ತಿ”ಯನ್ನು ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಅವರ ಧರ್ಮ ಪತ್ನಿ ಮೀನಾಕ್ಷಿ ಕೃಷ್ಣ ಬೈರೇಗೌಡ ಅವರಿಗೆ ಗದಗದಲ್ಲಿ ಮಂಗಳವಾರ ಪ್ರದಾನ ಮಾಡಲಾಯಿತು.
ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸಚಿವರಾದ ಎಚ್ಕೆ ಪಾಟೀಲ್, ಮಾಜಿ ಸಚಿವ ಎಸ್ಎಸ್ ಪಾಟೀಲ್, ಡಿ.ಆರ್.ಪಾಟೀಲ ಅವರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಯಿತು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಸವಜಯಂತಿ ಅಂಗವಾಗಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನವು ವಿಶ್ವ ಮಾನವತಾವಾದಿ ಬಸವಣ್ಣ ಪ್ರಶಸ್ತಿ ನೀಡುತ್ತಾ ಬಂದಿದೆ.