ಚಿತ್ರದುರ್ಗ
ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಬುಧವಾರ ಮುಂಜಾನೆ ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ತಾಣದ ಆವರಣದಲ್ಲಿ 12ನೇ ಶತಮಾನದ ಶಿವಶರಣರಾದ ಅಂಬಿಗರ ಚೌಡಯ್ಯನವರ ಜಯಂತಿ (ಶರಣೋತ್ಸವ) ಕಾರ್ಯಕ್ರಮ ನಡೆಯಿತು.
ಸಮಾರಂಭದ ಸಾನಿಧ್ಯವನ್ಯ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ, ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳವರ ವಹಿಸಿದ್ದರು. ಸಮ್ಮುಖವನ್ನು ಅಥಣಿ ಗಚ್ಚಿನಮಠದ ಶಿವ ಬಸವ ಮಹಾಸ್ವಾಮಿಗಳವರು, ಜೇವರ್ಗಿ ಮರುಳ ಶಂಕರ ಪೀಠದ ಸಿದ್ದ ಬಸವ ಕಬೀರ ಮಹಾಸ್ವಾಮಿಗಳು, ಮುರುಘೇಂದ್ರ ಮಹಾಸ್ವಾಮಿಗಳು, ಡಾ. ಬಸವಚೇತನ ಮಹಾಸ್ವಾಮಿಗಳು, ಈಚಲ ನಾಗೇನಹಳ್ಳಿ ಗೋವಿಂದ ಸ್ವಾಮಿಗಳು ವಹಿಸಿದ್ದರು.
ಜಾಗತಿಕ ಲಿಂಗಾಯತ ಮಹಾಸಭಾದ ನಿರ್ದೇಶಕರಾದ ಬಸವರಾಜ ಕಟ್ಟಿ, ಗಾಣಿಗ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ, ಬಿ.ಟಿ. ನಂದೀಶ, ನಿವೃತ್ತ ಪ್ರಾಚಾರ್ಯ ಟಿ.ಪಿ. ಜ್ಞಾನಮೂರ್ತಿ, ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಉಪಾಧ್ಯಕ್ಷ ನಾಗರಾಜ ಸಂಗಮ, ಕುರುಬ ಸಮಾಜದ ಪೈಲ್ವಾನ್ ತಿಪ್ಪೇಸ್ವಾಮಿ, ವೀರಶೈವ ಸಮಾಜದ ಶಿವಾನಂದ, ಎಸ್. ಜೆ. ಎಂ. ಪದವಿ ಕಾಲೇಜಿನ ಪ್ರಾಚಾರ್ಯ ಪಂಚಾಕ್ಷರಿ, ಪ್ರಾಧ್ಯಾಪಕ ಡಾ. ಆನಂದ, ಚನ್ನಪಟ್ಟಣದ ಉಮೇಶ, ಎಸ್ ಜೆಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪವಲ್ಲಿ ಹಾಗೂ ಸಿಬ್ಬಂದಿ ಸೇರಿದಂತೆ ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ ಕಾಲೇಜುಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಜೆ. ಎಂ. ಆಂಗ್ಲ ಮಾಧ್ಯಮ ಶಾಲೆಯ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಜರುಗಿತು.