ಮೈಸೂರಿನ ಬಳಿ ಮಂಡನಹಳ್ಳಿಯಲ್ಲಿ ಲಿಂಗಧಾರಣೆ ಕಾರ್ಯಕ್ರಮ

ಪ್ರಸನ್ನ. ಎಸ್. ಎಂ
ಪ್ರಸನ್ನ. ಎಸ್. ಎಂ

ಮೈಸೂರಿನ ಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ಲಿಂಗಧಾರಣೆ, ಶಿವಯೋಗ ಮತ್ತು ಉಪನ್ಯಾಸ ಕಾರ್ಯಕ್ರಮಗಳು ಯಶಸ್ವಿಯಾಗಿ ಭಾನುವಾರ ನಡೆದವು.

ಪೂಜ್ಯ ಬಸವಯೋಗಿಪ್ರಭು ಸ್ವಾಮೀಗಳು ಐದು ಜನರಿಗೆ ಲಿಂಗಧಾರಣೆ ಮಾಡಿ ಶಿವಯೋಗದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.

ಬಸವತತ್ವ ಪ್ರಚಾರಕರಾದ ಚೌಹಳ್ಳಿ ನಿಂಗರಾಜಪ್ಪನವರು ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಮೌಢ್ಯಗಳ ಬಗ್ಗೆ ಮಾತನಾಡಿ 12ನೇ ಶತಮಾನದ ಬಸವಾದಿಶರಣರು ಮೌಢ್ಯಗಳನ್ನು ಮೀರಿ ಬದುಕುವ ದಾರಿ ತೋರಿಸಿದ್ದಾರೆ ಎಂದು ವಿವರಿಸಿದರು.

ಬಸವಪ್ರತಿಷ್ಟಾನದ ಶಿವರುದ್ರಪ್ಪನವರು ಮಂಡನಹಳ್ಳಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಮಲ್ಲೇಶಪ್ಪ, ಮಹಾದೇವ ಸ್ವಾಮೀಜಿಯವರನ್ನು ಸನ್ಮಾನಿಸಿದರು. ಇದೇ ಊರಿನ ಪಿ ಎಚ್ .ಡಿ ಮಾಡುತ್ತಿರುವ ನಟರಾಜ್ ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಡನಹಳ್ಳಿ ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬಸವಭಾರತ ಪ್ರತಿಷ್ಠಾನ ಮತ್ತು ಮಂಡನಹಳ್ಳಿ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.

Share This Article
Leave a comment

Leave a Reply

Your email address will not be published. Required fields are marked *