ಇಂದಿನಿಂದ ಬಸವಕೇಂದ್ರ ಬೆಳ್ಳಿ ಹಬ್ಬದ “ಭವ್ಯ ಭಾರತದ ಬಸವಣ್ಣ” ಪ್ರವಚನ
ಬೀದರ್
ನಗರದ ಬಿವಿಬಿ ಮಹಾವಿದ್ಯಾಲಯದ ಆವರಣದಲ್ಲಿ ಇಂದಿನಿಂದ ಶುರುವಾಗಲಿರುವ ಪೂಜ್ಯ ನಿಜಗುಣಾನಂದ ಸ್ವಾಮೀಜಿಯವರ ಪ್ರವಚನವನ್ನು ನಿಷೇಧಿಸಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾ ಸಂಘ ಒತ್ತಾಯಿಸಿವೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಸಂಘಟನೆಯ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕನ್ನಡ ಪ್ರಭಾ ವರದಿ ಮಾಡಿದೆ.
ನಿಜಗುಣಾನಂದ ಸ್ವಾಮೀಜಿ ಬ್ರಾಹ್ಮಣ ಸಮುದಾಯದ, ಹಿಂದೂ ದೇವರುಗಳ ವಿರುದ್ಧ ವಿವಾದಾತ್ಮಕ ಪದಗಳನ್ನು ಸಾಮಾನ್ಯವಾಗಿ ಬಳಸುವುದರಿಂದ ಮುನ್ನಚ್ಚರಿಕೆ ಕೈಗೊಳ್ಳಬೇಕೆಂದು ಮನವಿಯಲ್ಲಿ ದೂರಲಾಗಿದೆ.
ಕಲ್ಯಾಣ ನಾಡಿನ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಬಾರದಂತೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಮಸ್ತ ಬ್ರಾಹ್ಮಣ ಸಮುದಾಯದ ಪರವಾಗಿ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಅಧ್ಯಕ್ಷರಾದ ರಮೇಶ ಕುಲಕರ್ಣಿ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ವೆಂಕಟೇಶ ಕುಲಕರ್ಣಿ ವಿನಂತಿಸಿದ್ದಾರೆ.
ನಗರದ ಬಸವ ಕೇಂದ್ರದ ವತಿಯಿಂದ ಮಾರ್ಚ್ 15ರಿಂದ ಏಪ್ರಿಲ್ 13ರ ವರಗೆ ಬಸವಕೇಂದ್ರದ ಬೆಳ್ಳಿ ಮಹೋತ್ಸವದ ಪ್ರಯುಕ್ತ “ಭವ್ಯ ಭಾರತದ ಬಸವಣ್ಣ” ಪ್ರವಚನವನ್ನು ಆಯೋಜಿಸಲಾಗಿದೆ.
ಪ್ರವಚನಕ್ಕೆ ಬೆಂಬಲ
ನಿಜಗುಣಾನಂದ ಸ್ವಾಮೀಜಿ ನಡೆಸಿಕೊಡಲಿರುವ ‘ಭವ್ಯ ಭಾರತದ ಬಸವಣ್ಣ’ ಪ್ರವಚನವನ್ನು ಯಶಸ್ವಿಗೊಳಿಸಲು ಒಕ್ಕೊರಲಿನ ಪ್ರಯತ್ನ ಮಾಡಬೇಕೆಂದು ನಗರದ ಬಸವಕೇಂದ್ರದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಎನ್ಎಸ್ಎಸ್ಕೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ವಚನ ಸಾಹಿತ್ಯ ಜಗತ್ತಿನ ಶ್ರೇಷ್ಠ ಸಾಹಿತ್ಯ. ಶರಣ ಸಂಸ್ಕೃತಿ ಉಳಿಸಿ ಬೆಳೆಸಲು ಪ್ರವಚನ ಸೂಕ್ತ ವೇದಿಕೆ ಎಂದರು.
ಬಸವಕೇಂದ್ರದ ಬೆಳ್ಳಿ ಮಹೋತ್ಸವದ ಅಂಗವಾಗಿ ತಿಂಗಳಿಡಿ ಪ್ರವಚನ ಹಮ್ಮಿಕೊಂಡಿರುವುದು ಶ್ಲಾಘನಾರ್ಹ ಕೆಲಸ. ನಿಜಗುಣಾನಂದ ಸ್ವಾಮೀಜಿ ಅತ್ಯಂತ ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಹೇಳುತ್ತಾರೆ. ಜಿಲ್ಲೆಯ ಪ್ರಗತಿಪರ ಚಿಂತಕರು, ವಿಚಾರವಾದಿಗಳು ಪ್ರವಚನಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.
ಇದೇ ವೇಳೆ ಭಿತ್ತಿಪತ್ರ, ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಹುಲಸೂರ ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿ ಶರಣ ಸಂಸ್ಕೃತಿ ಪಸರಿಸಲು ಬಸವ ಕೇಂದ್ರ ಸಾಕಷ್ಟು ಶ್ರಮಿಸಿದೆ ಎಂದರು.

ಗಂಟೆ ಬಾರಿಸುವ ಸಂಸ್ಕೃತಿ ಮುಂದುವರಿಯಬೇಕೆನ್ನುವವರು
ನಿಜಗುಣಾನಂದ ಸ್ವಾಮಿಗಳ ಪ್ರವಚನಕ್ಕೆ ಹಿಂದೂಗಳು ಬಂದು ಕುಳಿತು ಸಂಪೂರ್ಣ ಕೇಳಲಿ ಆಕ್ಷೇಪ ಇದ್ದರೆ ಪ್ರಶ್ನೆ ಮಾಡಲಿ. ಅದು ಬಿಟ್ಟು ಹೊರಗೆ ನಿಂತು ಸುಳ್ಳು ಹೇಳೋದು
So intolerant!
Brahmins suffering from such anti Lingayat
feelings ?
12th century saints must have suffered a lot !