‘ಸಮಾಜದ ಎಲ್ಲಾ ಪಿಡುಗುಗಳಿಗೂ ವಚನ ಸಾಹಿತ್ಯವೇ ಪರಿಹಾರ’

ಬಸವ ಮೀಡಿಯಾ
ಬಸವ ಮೀಡಿಯಾ

ದಾವಣಗೆರೆ

ದೇಶದಲ್ಲಿ ಮೂರು ಮುಖ್ಯ ಪಿಡುಗುಗಳಿವೆ ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆ ಈ ಮೂರು ಪಿಡುಗುಗಳಿಂದಾಗಿ ದೇಶದ ಅಭಿವೃದ್ಧಿ ಕುಂಠಿತ ಆಗಿದೆ ಈ ಎಲ್ಲಾ ಸಮಸ್ಯೆಗಳಿಗೆ ವಚನ ಸಾಹಿತ್ಯವೇ ಪರಿಹಾರ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶರಣ ಎಸ್. ಬಿ. ರುದ್ರೇಗೌಡರು ಅಭಿಪ್ರಾಯ ಪಟ್ಟರು.

ಅವರು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಆವರಗೆರೆ ಗ್ರಾಮದ ಶ್ರೀ ಮಂಜುನಾಥ ಪ್ರೌಢಶಾಲೆಯಲ್ಲಿ ನಡೆದ ವಚನ ಸಂರಕ್ಷಣೆ ದಿನ ಹಾಗೂ ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದತ್ತಿ ದಾನಿಗಳಾದ ಶರಣ ವಿಭೂತಿ ಬಸವಾನಂದ ಶರಣರು ಮಾತನಾಡಿ, ಭಾರತ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಇದು ಬಹುತ್ವದ ಭಾರತವಾಗಿ ಉಳಿಯಬೇಕಾದರೆ ವಚನ ಸಾಹಿತ್ಯ ಪ್ರಚಾರ ಆಗಬೇಕು ಎಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾದ ಶರಣ ಆವರಗೆರೆ ರುದ್ರಮುನಿ ಮಾತನಾಡಿ, ಸುಸಂಸ್ಕೃತ ಸಮಾಜ ನಿರ್ಮಾಣ ಮಕ್ಕಳಿಂದಲೇ ಸಾಧ್ಯ ಹಾಗಾಗಿ ಮಕ್ಕಳಿಗೆ ವಚನ ಸಾಹಿತ್ಯ ಉಣಬಡಿಸುವ ಕಾರ್ಯ ಮಹತ್ವದ್ದು ಎಂದು ತಿಳಿಸಿದರು.

ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಖಜಾಂಚಿಗಳಾದ ಮುದೇಗೌಡ್ರ ನಾಗರಾಜ ಕಕ್ಕರಗೊಳ್ಳ ಅವರು ದತ್ತಿ ದಾನಿಗಳ ಪರಿಚಯ ಮಾಡಿಕೊಟ್ಟರು. ಸಮಾರಂಭದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶರಣ ಪ್ರಕಾಶ ಎಂ.ಬಿ. ನೆರವೇರಿಸಿದರು.

ಅನುಭಾವ ನೀಡಿದ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಇವರು ವಚನ ಸಾಹಿತ್ಯದ ನಾಶ ಮಾಡುವ ಕೆಲಸ ಹೇಗಾಯಿತು, ಅದರ ಸಂರಕ್ಷಣೆಗಾಗಿ ಶರಣರು ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಬಗೆ ಹಾಗೂ ಫ. ಗು. ಹಳಕಟ್ಟಿ ಅವರ ಕುರಿತು ಅನುಭಾವವನ್ನು ಹಂಚಿಕೊಂಡರು.

ಪ್ರಾಸ್ತಾವಿಕವಾಗಿ ಪರಿಷತ್ತಿನ ಕಾರ್ಯದರ್ಶಿ ಶರಣ ಕರೂರು ಹನುಮಂತಪ್ಪ ವಚನ ಸಾಹಿತ್ಯದ ಕುರಿತು ಹಾಗೂ ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಿದರು.

ಕಾರ್ಯಕ್ರಮದಲ್ಲಿ ದಾವಣಗೆರೆ ತಾಲೂಕು ಮಹಿಳಾ ಬಂದುತ್ವ ವೇದಿಕೆಯ ಸುಮಲತಾ ಸೇರಿದಂತೆ ಶಾಲಾ ಸಿಬ್ಬಂದಿವರ್ಗ, ಗ್ರಾಮಸ್ಥರು, ಶಾಲಾ ಮಕ್ಕಳು ಭಾಗವಹಿಸಿದ್ದರು.

ಶಿಕ್ಷಕ ಲೋಕೇಶ ಅವರು ಸ್ವಾಗತಿಸಿದರು, ವಿರೂಪಾಕ್ಷಪ್ಪ ನಿರೂಪಣೆ ಮಾಡಿದರು,
ಜಗದೀಶ ಶರಣು ಸಮರ್ಪಣೆ ಮಾಡಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FgE69G06eauFQg8Bv3ecgq

Share This Article
Leave a comment

Leave a Reply

Your email address will not be published. Required fields are marked *