ಧಾರವಾಡ

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಮಾಧ್ಯಮ ಸಂಯೋಜಕರಾಗಿ ಪತ್ರಕರ್ತ ರವಿಕುಮಾರ ಕಗ್ಗಣ್ಣವರ ಆಯ್ಕೆಯಾಗಿದ್ದಾರೆ.
ಕಳೆದ 21 ವರುಷದಿಂದ ಪತ್ರಿಕಾರಂಗದಲ್ಲಿ ವಿಶಿಷ್ಟ ಸೇವೆ ಮಾಡುತ್ತಿರುವ ಇವರು ದಿನ ಪತ್ರಿಕೆಯಲ್ಲಿ ಪ್ರಧಾನ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಇವರನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ.
ಅಧ್ಯಕ್ಷ ಪ್ರದೀಪ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ ಮತ್ತು ಪದಾಧಿಕಾರಿಗಳು ಇವರ ಸೇವೆಯನ್ನು ಪರಿಗಣಿಸಿ ಮಹಾಸಭಾದ ಸಮಸ್ತ ಕಾರ್ಯಗಳನ್ನು ಪ್ರಚಾರ ಮಾಡಲು ನೇಮಕ ಮಾಡಿದ್ದಾರೆ.