ಭದ್ರಾವತಿ
ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಕಾರ್ಯಕರ್ತರ ಸಮಾವೇಶ ಭಾನುವಾರ (ಜೂನ್ 22) ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಬಸವ ಮಂಟಪದಲ್ಲಿ ನಡೆಯಲಿದೆ.
ಸಮಾವೇಶದ ಸಾನಿಧ್ಯವನ್ನು ಪೂಜ್ಯ ಡಾ. ಗಂಗಾದೇವಿ ಮಾತಾಜಿ, ಸಮ್ಮುಖವನ್ನು ಪೂಜ್ಯ ಬಸವಯೋಗಿ ಸ್ವಾಮೀಜಿ ವಹಿಸಲಿದ್ದಾರೆ.
ರಾಷ್ಟ್ರೀಯ ಬಸವ ದಳದ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ ಎನ್., ರಾಜ್ಯಾಧ್ಯಕ್ಷ ಕೆ. ವೀರೇಶ ಪಾಲ್ಗೊಳ್ಳಲಿದ್ದಾರೆಂದು, ಸಂಘಟನೆಯ ರಾಜ್ಯ ಉಪಾಧ್ಯಕ್ಷ ರವಿಶಂಕರ ತಿಳಿಸಿದ್ದಾರೆ.
