ಸಾಣೇಹಳ್ಳಿ
ಇಲ್ಲಿನ ಶ್ರೀ ಶಿವಕುಮಾರ ಕಲಾಸಂಘ ಮತ್ತು ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆಯ ಸಂಯುಕ್ತಾಶ್ರಯದಲ್ಲಿ, ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರ ಮಾರ್ಗದರ್ಶನದಲ್ಲಿ, ಪ್ರತಿವರ್ಷದಂತೆ ಈ ಬಾರಿಯೂ ಸಹ ‘ಮಕ್ಕಳ ಹಬ್ಬ’ (ಬೇಸಿಗೆ ಶಿಬಿರ)ವನ್ನು ಆಯೋಜಿಸಲಾಗಿದೆ.
ಕಳೆದ ೨೮ ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಈ ಶಿಬಿರದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಮಕ್ಕಳು ಭಾಗವಹಿಸುತ್ತ ಬಂದಿದ್ದಾರೆ.

ಏಪ್ರಿಲ್ ೧೨ ರಿಂದ ೨೮ ರವರೆಗೆ ನಡೆಯುವ ಈ ವರ್ಷದ ಶಿಬಿರದಲ್ಲಿ ಕೋಲಾಟ, ಚಿತ್ರಕಲೆ, ಮಣ್ಣಾಟ, ವೀರಗಾಸೆ, ಯೋಗಾಸನ, ರಂಗಾಟಗಳು, ದಿನಕ್ಕೊಂದು ಪದ್ಯ ರಚನೆ, ಮುಖವಾಡ ತಯಾರಿ, ಒಂದು ದಿನದ ಪ್ರವಾಸ, ಕಥೆ ಹೇಳುವ ಮತ್ತು ಕಥೆ ಕಟ್ಟುವ ತರಗತಿ, ಮಕ್ಕಳ ಸಿನೇಮಾ ವೀಕ್ಷಣೆ, ಮಕ್ಕಳ ತೇರು, ಪರಿಸರದ ಮೇಲಿನ ಉಪನ್ಯಾಸ, ನೃತ್ಯರೂಪಕಗಳು, ೩ ಅಥವಾ ೪ ನಾಟಕಗಳ ತಯಾರಿ ಹಾಗೂ ಪ್ರದರ್ಶನ ಮುಂತಾದ ಚಟುವಟಿಕೆಗಳಿರುತ್ತವೆ.
ಶಿಬಿರದ ಅವಧಿಯಲ್ಲಿ ಮಕ್ಕಳು ಸಾಣೇಹಳ್ಳಿಯಲ್ಲಿಯೇ ಇರುವುದು ಕಡ್ಡಾಯವಾಗಿದ್ದು. ಅವರಿಗೆ ಊಟ-ವಸತಿಯ ಸೌಲಭ್ಯವಿದೆ.

೧೦ ರಿಂದ ೧೪ ವರ್ಷದ ವಯಸ್ಸಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು. ಆಸಕ್ತರು ಹೆಚ್ಚಿನ ವಿವರಗಳಿಗೆ ಈ ಕೆಳಗಿನ ದೂರವಾಣಿಗಳ ಮೂಲಕ ಸಂಪರ್ಕಿಸಬಹುದೆಂದು ಕಲಾಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ೮೮೬೧೦೪೩೫೫೩ (ಮಧು), ೯೯೭೨೦೦೭೦೧೫ (ರಾಜು).
ಶರಣು