ಬೀದರ್
ಬಸವ ಜಯಂತಿಯ ಜೊತೆ ಪಂಚಾಚಾರ್ಯರ ಯುಗಮಾನೋತ್ಸವವನ್ನು ಜೋಡಿಸುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನಿರ್ಧಾರ ಖಂಡಿಸಿ ಜಿಲ್ಲೆಯ ಬಸವ ಸಂಘಟನೆಗಳು ಹಾಗೂ ಮಠಾಧೀಶರು ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದು, ದಿಕ್ಕಾರ ಹಾಕಿರುವ ವಿಡಿಯೋ ವೈರಲ್ ಆಗಿದೆ.
ಏಪ್ರಿಲ್ 30 ನಡೆಯಲಿರುವ ಬಸವ ಜಯಂತಿ ದಿನವೇ ಯುಗಮಾನೋತ್ಸವ ಆಚರಿಸಲು ಶಂಕರ ಬಿದರಿ ಅವರು ಕಳಿಸಿರುವ ಸುತ್ತೋಲೆಯ ವಿರುದ್ಧ ರಾಜ್ಯದಲ್ಲಿ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತವಿದೆ.