ಶಂಕ್ರಣ್ಣ ಸಂಕಣ್ಣವರ ಅವರಿಗೆ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ

ಬಸವ ಮೀಡಿಯಾ
ಬಸವ ಮೀಡಿಯಾ

ಅಣ್ಣಿಗೇರಿ

ರೋಣ ತಾಲ್ಲೂಕಿನ ಕೊತಬಾಳ ಗ್ರಾಮದ ಖ್ಯಾತ ಜಾನಪದ ಕಲಾವಿದ ಶಂಕ್ರಣ್ಣ ಸಂಕಣ್ಣವರ ಅವರು 5ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮರಣಾರ್ಥ ಕೊಡಮಾಡುವ ಈ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 18-02-2025 ರಂದು ಪಟ್ಟಣದ ಶ್ರೀಮತಿ ನಿಂಗಮ್ಮ ಎಸ್. ಹೂಗಾರ ಕಾಲೇಜು ಆವರಣದಲ್ಲಿ ಸಂಜೆ 6-00 ಗಂಟೆಗೆ ನಡೆಯಲಿದೆ.

ಸಮಾರಂಭದ ಸನ್ನಿಧಾನವನ್ನು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಡಂಬಳ – ಗದಗ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನವಲಗುಂದ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎನ್. ಎಚ್. ಕೋನರಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಇದುವರೆಗೆ ಪ್ರಶಸ್ತಿ ಪುರಸ್ಕೃತರು :

ಡಾ.ವೀರಣ್ಣ ರಾಜೂರ – 2020
ಡಾ.ಎಚ್‌.ಎಸ್.ಅನಪಮಾ – 2021
ಡಾ. ಅಬ್ದುಲ್ ಖಾದರ ನಡಕಟ್ಟಿನ – 2022
ಶ್ರೀ ಸುರೇಶ ಹೆಬ್ಳೀಕರ – 2023

ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಲು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ರಾಜ್ಯ ಪ್ರಶಸ್ತಿ ಸಮಿತಿಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

Share This Article
Leave a comment

Leave a Reply

Your email address will not be published. Required fields are marked *