ಹುಲಸೂರಿನಲ್ಲಿ ಶರಣ ಸಂಸ್ಕೃತಿ ಉತ್ಸವ, ವಚನ ರಥೋತ್ಸವ

ಬಸವ ಮೀಡಿಯಾ
ಬಸವ ಮೀಡಿಯಾ

ಹುಲಸೂರ:

ಸ್ಥಳೀಯ ಶ್ರೀ ಜಗದ್ಗುರು ಅಲ್ಲಮಪ್ರಭುದೇವರ ಶೂನ್ಯಪೀಠ ಅನುಭವ ಮಂಟಪದಲ್ಲಿ ಇಂದು  ‘ಶರಣ ಸಂಸ್ಕೃತಿ ಉತ್ಸವ’ ಮತ್ತು ‘ವಚನ ರಥೋತ್ಸವ’ ನಡೆಯಲಿದೆ.

ಈ ಉತ್ಸವದ ಅಂಗವಾಗಿ ನವೆಂಬರ್ 30ರಂದು ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಇಂದು ಸಂಜೆ 6 ಗಂಟೆಗೆ ಶರಣ ಸಂಸ್ಕೃತಿ ಉತ್ಸವದ ಉದ್ಘಾಟನೆಯ ಸಮಾರಂಭ ನಡೆಯಲಿದೆ. ಉತ್ಸವದ ಸನ್ನಿಧಾನವನ್ನು ಡಾ. ಶಿವಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರು ಮಾಡುವರು.

ಡಿಸೆಂಬರ್ 2ರಂದು ಮುಂಜಾನೆ 11:30 ಗಂಟೆಗೆ ಉತ್ಸವದ ಅಂಗವಾಗಿ ‘ವೈರಾಗ್ಯನಿಧಿ ಅಕ್ಕಮಹಾದೇವಿ ಪ್ರಶಸ್ತಿ’ ಪ್ರಧಾನ ಸಮಾರಂಭ ನಡೆಯಲಿದೆ. ಈ ಸಮಾರಂಭವನ್ನು ಸಚಿವ ಆರ್. ಬಿ. ತಿಮ್ಮಾಪುರ ಉದ್ಘಾಟಿಸಲಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೇ ಸಂದರ್ಭದಲ್ಲಿ 74 ಸಾಧಕರಿಗೆ ‘ಕಾಯಕ ರತ್ನ ಪ್ರಶಸ್ತಿ’ ನೀಡಲಾಗುವುದು.

ಮಧ್ಯಾಹ್ನ 3 ಗಂಟೆಗೆ ಬಸವಾದಿ ಶರಣರ ವಚನಕಟ್ಟುಗಳನ್ನು ಒಳಗೊಂಡ ‘ವಚನ ರಥೋತ್ಸವ’ ನಡೆಯಲಿದೆ. ರಥವನ್ನು ಶರಣೆಯರು ಎಳೆಯಲಿದ್ದಾರೆ.

ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

ಉತ್ಸವದ ಅಂಗವಾಗಿ ನವೆಂಬರ್ 26 ರಿಂದ ಡಿಸೆಂಬರ್ 2ರವರೆಗೆ ಪ್ರತಿದಿನ ಸಂಜೆ 6.30 ಗಂಟೆಗೆ ಜನವಾಡದ ಅಲ್ಲಮಪ್ರಭು ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ ಅವರಿಂದ ಪ್ರವಚನ ನಡೆಯಲಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *