ಧಾರವಾಡ
ಮೇ 18ರಂದು ನಡೆಯಲಿರುವ ರಾಜ್ಯಮಟ್ಟದ ಪ್ರಥಮ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಧಾರವಾಡದ ಸಾಹಿತಿ ಪ್ರೊ. ಶಶಿಧರ ತೋಡಕರ ಆಯ್ಕೆಯಾಗಿದ್ದಾರೆ.
ರಾಜ್ಯ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗದ ನೇತೃತ್ವದಲ್ಲಿ ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸಮ್ಮೇಳನ ಜರುಗಲಿದೆ.
ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರ ಸೇವಾ ದೀಕ್ಷೆ ಹಾಗೂ ರಾಜ್ಯಮಟ್ಟದ ಕರುನಾಡ ರತ್ನ ಪ್ರಶಸ್ತಿ ಪ್ರದಾನ ನಡೆಯುವುದು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಎಸ್.ಡಿ. ಮುಡೆಣ್ಣವರ, ಧಾರವಾಡ ಜಿಲ್ಲಾ ಅಧ್ಯಕ್ಷ ದ್ಯಾಮಣ್ಣ ಬಳಗಾನೂರ ತಿಳಿಸಿದ್ದಾರೆ.
ಸಾಮಾಜಿಕ ಕಳಕಳಿಯ ಚಿಂತಕ ಶಶಿಧರ ತೋಡಕರ ಅವರು ಸಾಹಿತ್ಯ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ರಂಗಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಗ್ರಾಮೀಣ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿರುವ ಧಾರವಾಡದ ಹಿರೇಮಲ್ಲೂರ ಈಶ್ವರನ್ ಕಾಲೇಜಿನ ಪ್ರಾಚಾರ್ಯರಾಗಿ ಶಶಿಧರ ತೋಡಕರ ದುಡಿಯುತ್ತಿದ್ದಾರೆ.
ಶಶಿಧರ ತೊಡಕರ ಬಸವ ಮೀಡಿಯಾ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ.