ವಿಜಯಪುರ
ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಾನುಭವ ಮಂಟಪವು ಹುಬ್ಬಳ್ಳಿಯ ಮೂರು ಸಾವಿರ ಮಹಾಸಂಸ್ಥಾನ ಮಠದ ಪೂಜ್ಯ ಡಾ. ಗುರುಸಿದ್ದರಾಜ ಯೋಗೀಂದ್ರ ಮಹಾಸ್ವಾಮಿಗಳು, ಕೊಪ್ಪಳದ ಶ್ರೀ ಗವಿಮಠದ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮಪೂಜ್ಯ ಶ್ರೀ ಬಸವಲಿಂಗ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಲೋಕಾರ್ಪಣೆಗೊಂಡಿತು.
ಅತ್ಯಂತ ಸುಸಜ್ಜಿತವಾಗಿರುವ ಕಟ್ಟಡದಲ್ಲಿ ನೂರಾರು ಜನ ಪಾಲ್ಗೊಳ್ಳಬಹುದಾಗಿದೆ. ಲಿಂಗೈಕ್ಯ ಶರಣ ಬಿ.ಎಂ. ಪಾಟೀಲ ಅವರ ಹೆಸರಿನಲ್ಲಿ ದಾಸೋಹ ಭವನವನ್ನು ನಿರ್ಮಿಸಲಾಗಿದೆ.
BLDE ಸಂಸ್ಥೆ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಮಾತನಾಡುತ್ತಾ, ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಸಿದ್ದೇಶ್ವರ ಸಂಸ್ಥೆಗೆ ಎಲ್ಲರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶ್ರಮಿಸಿದ ಮಹನೀಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಸೇರಿದಂತೆ ಸಮಾಜದ ಗುರುಹಿರಿಯರು, ಬಸವ ಭಕ್ತರು ಉಪಸ್ಥಿತರಿದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KW7PgYimGT7HL73bAEKzSR