ಧಾರವಾಡ
ತ್ರಿವಿದ ದಾಸೋಹಿ ಲಿಂ. ಶ್ರೀ ಮಹಾಂತಪ್ಪಗಳ 31ನೇ ಸ್ಮರಣೋತ್ಸವ ಕಾರ್ಯಕ್ರಮ ಜೂ. 28 ರಂದು ಶಹರ ಮುರಘಾಮಠದ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಬೆಳಿಗ್ಗೆ 9ಕ್ಕೆ ಮುರಘಾಮಠದ ಪೀಠಾಧ್ಯಕ್ಷ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಶ್ರೀ ಮಹಾಂತಪ್ಪಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ನೆರವೇರಲಿದ್ದು, ನಂತರ 11 ಕ್ಕೆ ಸ್ಮರಣೋತ್ಸವ ಸಮಾರಂಭ ಜರುಗಲಿದೆ.

ಇಳಕಲ್ಲ ಚಿತ್ತರಗಿ ಸಂಸ್ಥಾನಮಠದ ಶ್ರೀ ಗುರುಮಹಾಂತ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಬೆಳಗಾವಿ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮಿಜಿ ಸಮ್ಮುಖವಹಿಸುವರು.
ವಿಪ ಸಭಾಪತಿ ಬಸವರಾಜ ಹೊರಟ್ಟಿ ಸಮಾರಂಭ ಉದ್ಘಾಟಿಸಲಿದ್ದು, ವೈಶುದೀಪ ಫೌಂಡೇಶನ್ ಚೇರಮನ್ ಶ್ರೀಮತಿ ಶಿವಲೀಲಾ ಕುಲಕರ್ಣಿ ಅಧ್ಯಕ್ಷತೆವಹಿಸುವರು.
ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ಪ್ರಸಾದ ಅಬ್ಬಯ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಡಾ.ಸಂಗಮನಾಥ ಲೋಕಾಪೂರ ಉಪನ್ಯಾಸ ನೀಡಲಿದ್ದು, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹಾಗೂ ನಿವೃತ್ತ ಇಂಜನೀಯರ ಶಿವಯೋಗಿ ಹಿರೇಮಠ ಅವರಿಗೆ ಸನ್ಮಾನ ಮಾಡಲಾಗುವುದು.
ಡಾ.ಮೃತ್ಯುಂಜಯ ಶೆಟ್ಟರ ವಚನ ಸಂಗೀತ ನಡೆಸಿಕೊಡಲಿದ್ದು ಈ ಸಮಾರಂಭಕ್ಕೆ ಶ್ರೀಮಠದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.