ಸಿರಿಗೆರೆ
ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಸಡಗರ, ಸಂಭ್ರಮದಿಂದ ಇತ್ತೀಚೆಗೆ ಆಚರಿಸಲಾಯಿತು.
ಶಂಭುಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ಬಸವಣ್ಣನವರ ಭವ್ಯ ಭಾವಚಿತ್ರದ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ನಾಗನಾಥೇಶ್ವರ ದೇವಸ್ಥಾನದವರೆಗೆ ಸಾಗಿಬಂದಿತು. ಮೆರವಣಿಗೆಯಲ್ಲಿ ಧಾತ್ರಿ ರಂಗಸಂಸ್ಥೆ ಕಲಾವಿದರ ಡೊಳ್ಳು ಕುಣಿತ, ಜಾನಪದಕಲಾ ಕುಣಿತ, ಬಸವೇಶ್ವರ ಮತ್ತು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿದ್ದ ಯುವಜನರು ನೋಡುಗರ ಗಮನ ಸೆಳೆದರು.