ಬೀದರ
ಹನ್ನೆರಡನೆಯ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ನುಡಿದರು.
ನಗರದ ಗಾಂಧಿಗಂಜ್ನ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ‘ವಚನ ಮಂಟಪ’ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ‘ವಚನಗಳಲ್ಲಿ ಅನುಭವ ಮಂಟಪದ ಐತಿಹಾಸಿಕತೆ’ ಕುರಿತು ಅವರು ಮಾತನಾಡಿದರು.
ಭೌತಿಕ ಅನುಭವ ಮಂಟಪವೇ ಇರಲಿಲ್ಲ. ವಚನಗಳಲ್ಲಿ ಎಲ್ಲೂ ಅನುಭವ ಮಂಟಪದ ಪ್ರಸ್ತಾಪವಿಲ್ಲ ಎಂದು ಚಿಂತಕಿ ವೀಣಾ ಬನ್ನಂಜೆ ಇತ್ತೀಚಿಗೆ ನೀಡಿರುವ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದರು.