ವೀಣಾ ಯಲಿಗಾರ, ಬಿ.ಆರ್.ಪೋಲಿಸ ಪಾಟೀಲ ‘ವಚನ ಸಿರಿ’, ‘ಸಾಹಿತ್ಯ ಸಿರಿ’ ಪ್ರಶಸ್ತಿಗೆ ಆಯ್ಕೆ

ಬಸವ ಮೀಡಿಯಾ
ಬಸವ ಮೀಡಿಯಾ

ಸಿಂದಗಿ :

 ರಾಜ್ಯಮಟ್ಟದ ಪ್ರತಿಷ್ಠಿತ ‘ವಚನ ಸಿರಿ’ ಹಾಗೂ ‘ಸಾಹಿತ್ಯ ಸಿರಿ’ ಪ್ರಶಸ್ತಿಗಳಿಗೆ ಈ ವರ್ಷದ ಗಣ್ಯರ ಆಯ್ಕೆ ಪ್ರಕಟವಾಗಿದೆ.

ವಚನ ಸಾಹಿತ್ಯ ಮತ್ತು ಸಂಶೋಧನೆಗೆ ಧಾರವಾಡದ ಪ್ರಾಧ್ಯಾಪಕಿ ವೀಣಾ ಯಲಿಗಾರ ಅವರು ‘ವಚನ ಸಿರಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಸಂಶೋಧನೆಗೆ ‘ಸಾಹಿತ್ಯ ಸಿರಿ’ ಪ್ರಶಸ್ತಿಗೆ ಮುದ್ದೇಬಿಹಾಳ ತಾಲ್ಲೂಕಿನ ಕೊಣ್ಣೂರು ಗ್ರಾಮದ ಖ್ಯಾತ ಸಾಹಿತಿ ಬಿ.ಆರ್. ಪೋಲಿಸ ಪಾಟೀಲ ಅವರು ಆಯ್ಕೆಯಾಗಿದ್ದಾರೆ.

ಈ ಎರಡೂ ಪ್ರಶಸ್ತಿಗಳು ತಲಾ ₹10,000 ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿವೆ.

ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಸ್ಮರಣಾರ್ಥವಾಗಿ ಅವರ ಕುಟುಂಬಸ್ಥರು ಸ್ಥಾಪಿಸಿರುವ ಕಲಬುರ್ಗಿ ಫೌಂಡೇಶನ್ ವತಿಯಿಂದ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.

ಫೆಬ್ರವರಿ 28ರಂದು ಸಿಂದಗಿ ತಾಲ್ಲೂಕಿನ ಸಿದ್ಧಾರೂಢ ಮಠದ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಾಹಿತ್ಯಾಸಕ್ತರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಫೌಂಡೇಶನ್ ಅಧ್ಯಕ್ಷ ಶಿವಲಿಂಗ ಕಲಬುರ್ಗಿ ತಿಳಿಸಿದ್ದಾರೆ.

ಈ ಪ್ರಶಸ್ತಿಗಳ ಮೂಲಕ ವಚನ ಸಾಹಿತ್ಯ ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ.

ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿ
https://www.facebook.com/basavamedia1/

Share This Article
Leave a comment

Leave a Reply

Your email address will not be published. Required fields are marked *