ಜಾತಿ ಜನಗಣತಿಯಲ್ಲಿ ‘ವೀರಶೈವ ಲಿಂಗಾಯತ’ ಎಂದೇ ಬರೆಸಿ: ರಂಭಾಪುರಿ ಶ್ರೀ

ಬಸವ ಮೀಡಿಯಾ
ಬಸವ ಮೀಡಿಯಾ

ಬಾಳೆಹೊನ್ನೂರು

ರಂಭಾಪುರಿ ಪೀಠದಲ್ಲಿ ಬುಧವಾರ ನಡೆದ ಪೌರ್ಣಿಮೆಯ ಧರ್ಮ ಸಮಾರಂಭದಲ್ಲಿ ರಂಭಾಪುರಿ ಜಗದ್ಗುರುಗಳು ಮಾತನಾಡುತ್ತಾ, ಮುಂಬರುವ ಜಾತಿ ಜನಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಧರ್ಮದ ಎಲ್ಲಾ ಒಳಪಂಗಡದವರು ‘ವೀರಶೈವ ಲಿಂಗಾಯತ’ ಎಂದೇ ಬರೆಸಬೇಕೆಂದು ಕರೆ ನೀಡಿದರು.

ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಮತ್ತೊಮ್ಮೆ ಮಾಡಬೇಕೆಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರ ಹೇಳಿಕೆಗೆ ಎಲ್ಲರಿಂದ ಸಹಮತ ಬಂದಿರುವುದನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಸ್ವಾಗತಿಸಿದ್ದಾರೆ.

ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅವರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿ, ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಕ್ಷೇತ್ರನಾಥ ವೀರಭದ್ರಸ್ವಾಮಿಗೆ ಪೂಜೆ ಸಲ್ಲಿಸಿ, ರಂಭಾಪುರಿ ಶ್ರೀಗಳ ದರ್ಶನಾಶೀರ್ವಾದ ಪಡೆದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/DAHwtSaP5nUL2sT483TnP6

Share This Article
Leave a comment

Leave a Reply

Your email address will not be published. Required fields are marked *